ಅಧ್ಯಾಯ 53

ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
2 ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
3 ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
4 ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
5 ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
6 ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
7 ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
8 ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
9 ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
10 ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
11 ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.
12 ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.